1
ಯೆಶಾಯ 1:18
ಕನ್ನಡ ಸತ್ಯವೇದವು C.L. Bible (BSI)
KANCLBSI
ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.
Compare
Explore ಯೆಶಾಯ 1:18
2
ಯೆಶಾಯ 1:19
ನೀವು ಮನಃಪೂರ್ವಕವಾಗಿ ನನಗೆ ವಿಧೇಯರಾದರೆ ಈ ನಾಡಿನ ಸತ್ಫಲವನ್ನು ಸವಿಯುವಿರಿ.
Explore ಯೆಶಾಯ 1:19
3
ಯೆಶಾಯ 1:17
ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿಂಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.
Explore ಯೆಶಾಯ 1:17
4
ಯೆಶಾಯ 1:20
ಇದಕ್ಕೊಪ್ಪದೆ ಪ್ರತಿಭಟಿಸಿದ್ದೇ ಆದರೆ, ಸಾವಿಗೆ ತುತ್ತಾಗುವಿರಿ. ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”
Explore ಯೆಶಾಯ 1:20
5
ಯೆಶಾಯ 1:16
ತೊಳೆದುಕೊಳ್ಳಿರಿ, ನಿಮ್ಮನ್ನೆ ಶುದ್ಧಮಾಡಿಕೊಳ್ಳಿರಿ. ಕಣ್ಣಿಗೆ ಕಟ್ಟಿದಂತಿರುವ ನಿಮ್ಮ ದುಷ್ಕೃತ್ಯಗಳು ನೀಗಿಹೋಗಲಿ.
Explore ಯೆಶಾಯ 1:16
6
ಯೆಶಾಯ 1:15
ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.
Explore ಯೆಶಾಯ 1:15
7
ಯೆಶಾಯ 1:13
ನಿಮ್ಮ ನೈವೇದ್ಯಗಳನ್ನು ಇನ್ನು ತರಬೇಡಿ, ಅವು ವ್ಯರ್ಥ. ನಿಮ್ಮ ಧೂಪಾರತಿ ನನಗೆ ಅಸಹ್ಯ. ನೀವು ಆಚರಿಸುವ ಹಬ್ಬ ಹುಣ್ಣಿಮೆ, ಸಬ್ಬತ್ ವಿಶ್ರಾಂತಿ, ನಿಮ್ಮ ಸಭೆಕೂಟಗಳು ನನಗೆ ಬೇಡ. ಅಧರ್ಮದಿಂದ ಕೂಡಿದ ಇಂಥ ಸಮಾರಂಭಗಳು ನನಗೆ ಇಷ್ಟವಿಲ್ಲ.
Explore ಯೆಶಾಯ 1:13
8
ಯೆಶಾಯ 1:3
ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ಬಲ್ಲವು. ಆದರೆ ನನ್ನ ಪ್ರಜೆಗಳಾದ ಇಸ್ರಯೇಲರಿಗೆ ಅಷ್ಟೂ ತಿಳಿದಿಲ್ಲ. ಅವರಿಗೆ ಏನೂ ತಿಳಿಯುವುದಿಲ್ಲ.
Explore ಯೆಶಾಯ 1:3
9
ಯೆಶಾಯ 1:14
ನಿಮ್ಮ ಹಬ್ಬ ಹುಣ್ಣಿಮೆಗಳು, ಉತ್ಸವ ದಿನಗಳು ನನ್ನ ಮನಕ್ಕೆ ವಿರುದ್ಧ, ಹೊರಲಾಗದ ಭಾರ, ಸಹಿಸಲಾಗದ ಬೇಸರ.
Explore ಯೆಶಾಯ 1:14