1
ಯೆಶಾಯ 23:18
ಕನ್ನಡ ಸತ್ಯವೇದವು C.L. Bible (BSI)
KANCLBSI
ಅವಳ ವ್ಯಾಪಾರದಿಂದ ಬಂದ ಆದಾಯ ಅವಳಿಗೆ ನಿಧಿನಿಕ್ಷೇಪವಾಗದೆ ಸರ್ವೇಶ್ವರ ಸ್ವಾಮಿಗೆ ಮೀಸಲಾಗುವುದು. ಅದು ಸರ್ವೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ವಾಸಮಾಡುವವರಿಗೆ ಬೇಕಾದಷ್ಟು ಆಹಾರವನ್ನೂ ಅತ್ಯುತ್ತಮವಾದ ಉಡುಪನ್ನೂ ಒದಗಿಸುವುದು.
Compare
Explore ಯೆಶಾಯ 23:18
2
ಯೆಶಾಯ 23:9
ಇದು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಸಂಕಲ್ಪವೇ ಸರಿ. ಗರ್ವಿಗಳ ಸಕಲ ದರ್ಪವನ್ನು ದಮನಮಾಡಲು, ವಿಶ್ವವಿಖ್ಯಾತರನ್ನು ಅವಮಾನಗೊಳಿಸಲು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಯೋಜನೆಯಿದು.
Explore ಯೆಶಾಯ 23:9
3
ಯೆಶಾಯ 23:1
ಟೈರ್ ನಗರವನ್ನು ಕುರಿತ ದೈವೋಕ್ತಿ : “ಗೋಳಾಡಿರಿ ತಾರ್ಷಿಷಿನ ನಾವಿಕರೆಲ್ಲ, ಹಾಳಾಗಿವೆ ನಿಮ್ಮ ಬಂದರುಗಳೆಲ್ಲ; ಹಡಗುಗಳಿಗೆ ರೇವಿಲ್ಲ, ನೆಲೆಯಿಲ್ಲ, ಸೈಪ್ರಸ್ಸಿನಿಂದ ಬಂದ ನಾವಿಕರಿಂದ ಈ ಸುದ್ದಿ ನಿಮಗೆ ತಿಳಿಯುವುದು.”
Explore ಯೆಶಾಯ 23:1