ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇವರು ನನ್ನ ಜನರು; ನಾನು ಕಾರ್ಯತತ್ಪರನಾಗುವ ದಿನದಂದು ಅವರು ನನಗೆ ಸ್ವಕೀಯಜನರಾಗಿರುವರು. ತಂದೆಯೊಬ್ಬನು ತನಗೆ ಸೇವೆಮಾಡುವ ಮಗನನ್ನು ಕಾಪಾಡುವಂತೆ ನಾನು ಅವರನ್ನು ಕಾಪಾಡುವೆನು. ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.