1
ಮಲಾಕಿಯ 4:5-6
ಕನ್ನಡ ಸತ್ಯವೇದವು C.L. Bible (BSI)
KANCLBSI
“ಇಗೋ, ಸರ್ವೇಶ್ವರಸ್ವಾಮಿಯ ಆಗಮನದ ಭಯಂಕರ ಮಹಾದಿನ ಬರುವುದಕ್ಕೆ ಮುಂಚೆ ಪ್ರವಾದಿ ಎಲೀಯನನ್ನು ನಿಮ್ಮಲ್ಲಿಗೆ ಕಳುಹಿಸುವೆನು. ನಾನು ಬಂದು ಲೋಕವನ್ನು ಶಪಿಸಿ ನಾಶಗೊಳಿಸದಂತೆ ಆತನು ಹೆತ್ತವರ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ಹೆತ್ತವರ ಕಡೆಗೂ ಒಲಿಸಿ ಅವರನ್ನು ಒಂದಾಗಿಸುವನು.”
Compare
Explore ಮಲಾಕಿಯ 4:5-6
2
ಮಲಾಕಿಯ 4:1
“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.
Explore ಮಲಾಕಿಯ 4:1