1
ಮತ್ತಾಯ 14:30-31
ಕನ್ನಡ ಸತ್ಯವೇದವು C.L. Bible (BSI)
KANCLBSI
ಆದರೆ ಬಲವಾದ ಗಾಳಿ ಬೀಸುತ್ತಿರುವುದನ್ನು ಕಂಡು ಹೆದರಿದನು. ಹಾಗೆಯೇ ಮುಳುಗಿಹೋಗಲಾರಂಭಿಸಿದನು. ಆಗ, “ಸ್ವಾಮೀ, ಕಾಪಾಡಿ, ಕಾಪಾಡಿ,” ಎಂದು ಕೂಗಿಕೊಂಡನು. ಆ ಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದುಕೊಂಡು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದರು.
Compare
Explore ಮತ್ತಾಯ 14:30-31
2
ಮತ್ತಾಯ 14:30
ಆದರೆ ಬಲವಾದ ಗಾಳಿ ಬೀಸುತ್ತಿರುವುದನ್ನು ಕಂಡು ಹೆದರಿದನು. ಹಾಗೆಯೇ ಮುಳುಗಿಹೋಗಲಾರಂಭಿಸಿದನು. ಆಗ, “ಸ್ವಾಮೀ, ಕಾಪಾಡಿ, ಕಾಪಾಡಿ,” ಎಂದು ಕೂಗಿಕೊಂಡನು.
Explore ಮತ್ತಾಯ 14:30
3
ಮತ್ತಾಯ 14:27
ತಕ್ಷಣವೇ ಯೇಸು, “ಭಯಪಡಬೇಡಿ, ನಾನೇ ಬೇರೆ ಯಾರೂ ಅಲ್ಲ, ಧೈರ್ಯದಿಂದಿರಿ,” ಎಂದು ಅವರೊಡನೆ ಮಾತನಾಡಿದರು.
Explore ಮತ್ತಾಯ 14:27
4
ಮತ್ತಾಯ 14:28-29
ಆಗ ಪೇತ್ರನು, “ಸ್ವಾಮೀ, ನೀವೇ ಆದರೆ ನಾನೂ ನೀರಿನ ಮೇಲೆ ನಡೆದು ನಿಮ್ಮ ಬಳಿಗೆ ಬರುವಂತೆ ಆಜ್ಞಾಪಿಸಿ,” ಎಂದನು. ಯೇಸು, “ಬಾ” ಎಂದು ಕರೆಯಲು ಪೇತ್ರನು ದೋಣಿಯನ್ನು ಬಿಟ್ಟು ನೀರಿನ ಮೇಲೆ ನಡೆಯುತ್ತಾ ಯೇಸುವಿನತ್ತ ಬಂದನು.
Explore ಮತ್ತಾಯ 14:28-29
5
ಮತ್ತಾಯ 14:33
ದೋಣಿಯಲ್ಲಿದ್ದವರು, “ನೀವು ನಿಜವಾಗಿಯೂ ದೇವರ ಪುತ್ರ!” ಎಂದು ಹೇಳಿ ಯೇಸುವನ್ನು ಆರಾಧಿಸಿದರು.
Explore ಮತ್ತಾಯ 14:33
6
ಮತ್ತಾಯ 14:16-17
ಅದಕ್ಕೆ ಯೇಸು, “ಅವರು ಹೋಗಬೇಕಾಗಿಲ್ಲ, ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿ,” ಎಂದರು. ಶಿಷ್ಯರು ಪ್ರತ್ಯುತ್ತರವಾಗಿ, “ನಮ್ಮ ಬಳಿ ಐದೇ ಐದು ರೊಟ್ಟಿ ಮತ್ತು ಎರಡು ಮೀನುಗಳು ಮಾತ್ರ ಇವೆ,” ಎಂದರು.
Explore ಮತ್ತಾಯ 14:16-17
7
ಮತ್ತಾಯ 14:18-19
ಯೇಸು, “ಅವನ್ನು ಇಲ್ಲಿಗೆ ತನ್ನಿ,” ಎಂದು ಹೇಳಿ, ಜನರೆಲ್ಲರೂ ಹುಲ್ಲಿನ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಮಾಡಿದರು. ಬಳಿಕ ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು, ಸ್ವರ್ಗದತ್ತ ಕಣ್ಣೆತ್ತಿನೋಡಿ, ದೇವರಿಗೆ ಸ್ತೋತ್ರಸಲ್ಲಿಸಿದರು. ತರುವಾಯ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನರಿಗೆ ಹಂಚಿದರು.
Explore ಮತ್ತಾಯ 14:18-19
8
ಮತ್ತಾಯ 14:20
ಎಲ್ಲರೂ ಹೊಟ್ಟೆತುಂಬ ತಿಂದು ತೃಪ್ತರಾದರು. ಉಳಿದಿದ್ದ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಹನ್ನೆರಡು ಬುಟ್ಟಿಗಳ ತುಂಬ ಆದುವು.
Explore ಮತ್ತಾಯ 14:20