ಇದು ನಿಮಗೆ ಗೊತ್ತು. ನೀವು ಹಾಗಿರಬಾರದು. ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮಗೆ ಸೇವಕನಾಗಿರಲಿ. ಪ್ರಥಮನಾಗಿರಲು ಆಶಿಸುವವನು ನಿಮ್ಮ ದಾಸನಾಗಿರಲಿ. ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.