1
ಮತ್ತಾಯ 8:26
ಕನ್ನಡ ಸತ್ಯವೇದವು C.L. Bible (BSI)
KANCLBSI
ಅದಕ್ಕೆ ಯೇಸು, “ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ?” ಎಂದರು. ಅನಂತರ ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು.
Compare
Explore ಮತ್ತಾಯ 8:26
2
ಮತ್ತಾಯ 8:8
ಅದಕ್ಕೆ ಆ ಶತಾಧಿಪತಿ, “ಪ್ರಭುವೇ, ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ. ತಾವು ಒಂದೇ ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು.
Explore ಮತ್ತಾಯ 8:8
3
ಮತ್ತಾಯ 8:10
ಈ ಮಾತನ್ನು ಕೇಳಿದ್ದೇ ಯೇಸುವಿಗೆ ಅತ್ಯಾಶ್ಚರ್ಯವಾಯಿತು. ತಮ್ಮನ್ನು ಹಿಂಬಾಲಿಸಿ ಬರುತ್ತಿದ್ದ ಜನರನ್ನು ನೋಡಿ ಹೀಗೆಂದರು: “ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲಿ ಕೂಡ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.
Explore ಮತ್ತಾಯ 8:10
4
ಮತ್ತಾಯ 8:13
ಅನಂತರ ಯೇಸು ಆ ಶತಾಧಿಪತಿಗೆ, “ಇನ್ನು ಮನೆಗೆ ಹೋಗು, ನೀನು ವಿಶ್ವಾಸಿಸಿದಂತೆಯೇ ಆಗುವುದು,” ಎಂದರು. ಅದೇ ಕ್ಷಣದಲ್ಲಿ ಅವನ ಸೇವಕನು ಸ್ವಸ್ಥನಾದನು.
Explore ಮತ್ತಾಯ 8:13
5
ಮತ್ತಾಯ 8:27
ಆಗ ವಾತಾವರಣ ಪ್ರಶಾಂತವಾಯಿತು. ಶಿಷ್ಯರು ನಿಬ್ಬೆರಗಾದರು. “ಗಾಳಿಯೂ ಸರೋವರವೂ ಇವರು ಹೇಳಿದ್ದಂತೆ ಕೇಳಬೇಕಾದರೆ ಇವರೆಂತಹ ವ್ಯಕ್ತಿಯಾಗಿರಬೇಕು!” ಎಂದುಕೊಂಡರು.
Explore ಮತ್ತಾಯ 8:27