“ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.