ಆಗ ಆಕೆ ಬಂದು ಆತನ ಮುಂದೆ ಅಡ್ಡ ಬಿದ್ದು, “ಕರ್ತನೇ ನನಗೆ ಸಹಾಯಮಾಡು” ಅಂದಳು. ಅದಕ್ಕಾತನು, “ಮಕ್ಕಳ ರೊಟ್ಟಿಯನ್ನು ತೆಗೆದುಕೊಂಡು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಉತ್ತರಕೊಟ್ಟನು. ಆಕೆಯು, “ಹೌದು, ಕರ್ತನೇ, ಆದರೆ ನಾಯಿಮರಿಗಳಂತೂ ತಮ್ಮ ಯಜಮಾನನ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ” ಅಂದಳು.