ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.
ಜ್ಞಾನಿಗಳು ಹೋದ ಮೇಲೆ ದೇವದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಎದ್ದು ಕೂಸನ್ನೂ, ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಓಡಿಹೋಗು, ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು” ಎಂದನು.