ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು