ಸಮುವೇಲನು, “ನೀನು ಬುದ್ಧಿಹೀನಕೃತ್ಯವನ್ನು ಮಾಡಿದೆ. ನಿನ್ನ ದೇವರಾದ ಯೆಹೋವನ ಆಜ್ಞೆಗೆ ನೀನು ವಿಧೇಯನಾಗಲಿಲ್ಲ. ನೀನು ಯೆಹೋವನ ಆಜ್ಞೆಗೆ ವಿಧೇಯನಾಗಿದ್ದರೆ, ನಿನ್ನ ಕುಟುಂಬವು ಇಸ್ರೇಲನ್ನು ಶಾಶ್ವತವಾಗಿ ಆಳುವಂತೆ ಯೆಹೋವನು ಮಾಡುತ್ತಿದ್ದನು. ಆದರೆ ಈಗ ನಿನ್ನ ಆಳ್ವಿಕೆಯು ಮುಂದುವರಿಯುವುದಿಲ್ಲ. ಯೆಹೋವನು ತನಗೆ ವಿಧೇಯನಾಗಿರುವಂತಹ ಮನುಷ್ಯನಿಗಾಗಿ ಹುಡುಕುತ್ತಿದ್ದನು. ಯೆಹೋವನಿಗೆ ಅಂತಹ ಮನುಷ್ಯನು ಸಿಕ್ಕಿದ್ದಾನೆ. ತನ್ನ ಜನರನ್ನು ಆಳಲು ಯೆಹೋವನು ಅವನನ್ನು ಹೊಸ ನಾಯಕನನ್ನಾಗಿ ನೇಮಿಸುತ್ತಾನೆ. ನೀನು ಯೆಹೋವನ ಆಜ್ಞೆಗೆ ವಿಧೇಯನಾಗಲಿಲ್ಲ. ಆದ್ದರಿಂದ ಯೆಹೋವನು ಹೊಸ ನಾಯಕನನ್ನು ಆರಿಸಿಕೊಳ್ಳುವನು” ಎಂದು ಹೇಳಿದನು.