ಈ ಸಂಗತಿಗಳನ್ನು ಕೇಳಿದ ದಾವೀದನು ಗತ್ನ ರಾಜನಾದ ಆಕೀಷನಿಗೆ ಬಹಳವಾಗಿ ಭಯಪಟ್ಟನು. ಆದ್ದರಿಂದ ದಾವೀದನು ಆಕೀಷನ ಮತ್ತು ಅವನ ಅಧಿಕಾರಿಗಳ ಎದುರಿನಲ್ಲಿ ಹುಚ್ಚನಂತೆ ನಟಿಸಿದನು. ದಾವೀದನು ಅವರೊಂದಿಗೆ ಇರುವಾಗಲೆಲ್ಲ ಹುಚ್ಚನಂತೆ ವರ್ತಿಸಿದನು. ಅವನು ದ್ವಾರದ ಬಾಗಿಲುಗಳ ಮೇಲೆ ಉಗುಳಿದನು; ಅವನ ಜೊಲ್ಲು ಗಡ್ಡದವರೆಗೂ ಸುರಿಯುವಂತೆ ಮಾಡಿಕೊಂಡನು.