ಅನಂತರ ಸಮುವೇಲನು ವಿಶೇಷವಾದ ಕಲ್ಲನ್ನು ನೆಡಿಸಿದನು. ಯೆಹೋವನು ಮಾಡಿದ ಕಾರ್ಯಗಳನ್ನು ಜನರು ಜ್ಞಾಪಿಸಿಕೊಳ್ಳುತ್ತಿರಲಿ ಎಂಬುದಕ್ಕಾಗಿ ಅವನು ಈ ರೀತಿ ಮಾಡಿದನು. ಸಮುವೇಲನು ಮಿಚ್ಪೆ ಮತ್ತು ಶೇನಿಗಳ ಮಧ್ಯೆ ಕಲ್ಲನ್ನು ನೆಟ್ಟು, “ಯೆಹೋವನು ಇಲ್ಲಿಯವರೆಗೂ ನಮಗೆ ಸಹಾಯ ಮಾಡಿದನು” ಎಂದು ಹೇಳಿ, ಅದಕ್ಕೆ “ಸಹಾಯದ ಕಲ್ಲು” ಎಂದು ಹೆಸರಿಟ್ಟನು.