ನಾವೆಲ್ಲ ಎಂದಾದರೂ ಒಂದು ದಿನ ಸಾಯುತ್ತೇವೆ ಎನ್ನುವುದು ನಿಜ. ನಾವೆಲ್ಲ ನೆಲದ ಮೇಲೆ ಚೆಲ್ಲಿದ ನೀರಿನಂತಿದ್ದೇವೆ. ಈ ನೀರನ್ನು ನೆಲದಿಂದ ಮತ್ತೆ ಒಟ್ಟುಗೂಡಿಸುವುದು ಯಾವ ವ್ಯಕ್ತಿಯಿಂದಲೂ ಸಾಧ್ಯವಿಲ್ಲ. ಆದರೆ ಜೀವವನ್ನು ತೆಗೆದುಬಿಡಲು ದೇವರು ಇಚ್ಛಿಸುವುದಿಲ್ಲ. ಬಲಾತ್ಕಾರವಾಗಿ ಹೊರಗೆ ನೂಕಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನದೇ ಆದ ಉಪಾಯವಿದೆ.