ಇಸ್ರೇಲಿನ ದೇವರು ಮಾತನಾಡಿದನು.
ಇಸ್ರೇಲಿನ ಬಂಡೆಯಾದಾತನು ನನಗೆ ತಿಳಿಸಿದನು.
‘ದೇವರಲ್ಲಿ ಭಯಭಕ್ತಿಯನ್ನಿಟ್ಟು
ಜನರನ್ನು ನ್ಯಾಯವಾಗಿ ಆಳುವ ವ್ಯಕ್ತಿಯು
ಹೊತ್ತಾರೆಯ ಬೆಳಕಿನ ಕಿರಣಗಳಂತೆಯೂ
ಮೋಡಗಳೇ ಇಲ್ಲದ ಮುಂಜಾನೆಯಂತೆಯೂ
ಮಳೆ ಬಿದ್ದನಂತರ ಬರುವ ಸೂರ್ಯನ ಬೆಳಕಿನಂತೆಯೂ
ಗರಿಕೆಯನ್ನು ನೆಲದಿಂದ ಮೂಡಿಸುವ ಮಳೆಯಂತೆಯೂ ಇದ್ದಾನೆ.’