ಅವರು, “ಯೆಹೋವನು ನಮ್ಮನ್ನು ಈಜಿಪ್ಟಿನಲ್ಲಿ ಕೊಂದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ನಮಗೆ ಈಜಿಪ್ಟಿನಲ್ಲಿ ಮಾಂಸವೂ ರೊಟ್ಟಿಯೂ ಇತ್ತು. ನಮಗೆ ಬೇಕಿದ್ದ ಆಹಾರವೆಲ್ಲಾ ನಮ್ಮಲ್ಲಿತ್ತು. ಆದರೆ ಈಗ ನೀವು ನಮ್ಮನ್ನು ಈ ಅರಣ್ಯಕ್ಕೆ ಕರೆದುಕೊಂಡು ಬಂದಿರಿ. ನಾವೆಲ್ಲರೂ ಇಲ್ಲಿ ಹಸಿವೆಯಿಂದ ಸಾಯುವೆವು” ಎಂದು ಹೇಳಿದರು.
ಆಗ ಯೆಹೋವನು ಮೋಶೆಗೆ, “ಆಕಾಶದಿಂದ ನಿಮಗೋಸ್ಕರ ರೊಟ್ಟಿ ಸುರಿಯುವಂತೆ ಮಾಡುವೆನು. ಪ್ರತಿದಿನ ಅವರು ಹೊರಗೆ ಹೋಗಿ, ತಮಗೆ ಆ ದಿನದಲ್ಲಿ ತಿನ್ನಲು ಬೇಕಾದ ಆಹಾರವನ್ನು ಕೂಡಿಸಿಕೊಳ್ಳಬೇಕು. ನಾನು ಹೇಳುವುದನ್ನು ಅವರು ಮಾಡುತ್ತಾರೊ ಇಲ್ಲವೊ ಎಂದು ನೋಡಲು ನಾನು ಇದನ್ನು ಮಾಡುವೆನು.