ಆರೋನನು ಇವೆಲ್ಲವನ್ನು ನೋಡಿ, ಬಸವನ ಮುಂದೆ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಬಳಿಕ, “ನಾಳೆ ಯೆಹೋವನನ್ನು ಸನ್ಮಾನಿಸಲು ಒಂದು ವಿಶೇಷ ಹಬ್ಬವಿರುವುದು” ಎಂದು ಪ್ರಕಟಿಸಿದನು.
ಮರುದಿನ ಮುಂಜಾನೆ ಜನರೆಲ್ಲರೂ ಬೇಗನೆ ಎದ್ದು ತಮ್ಮ ಪಶುಗಳನ್ನು ವಧಿಸಿ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಅರ್ಪಿಸಿ ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಬಳಿಕ ಎದ್ದು ಕುಣಿದಾಡಿದರು ಮತ್ತು ಕೂಗಾಡಿದರು.