ಅನೇಕ ಸಲ ಶತ್ರುಗಳು ಇಸ್ರೇಲರಿಗೆ ತುಂಬ ಕಷ್ಟಗಳನ್ನು ಉಂಟು ಮಾಡುತ್ತಿದ್ದರು. ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಿದ್ದರು; ಪ್ರತಿಸಲವೂ ಯೆಹೋವನು ಅವರ ಗೋಳಾಟವನ್ನು ಕೇಳಿ ಮರುಕಪಡುತ್ತಿದ್ದನು. ಪ್ರತಿಸಲವೂ ಅವರನ್ನು ಶತ್ರುಗಳಿಂದ ರಕ್ಷಿಸಲು ಒಬ್ಬ ನ್ಯಾಯಾಧೀಶನನ್ನು ಕಳುಹಿಸಿ ಕೊಡುತ್ತಿದ್ದನು. ಯೆಹೋವನು ಆ ನ್ಯಾಯಾಧೀಶರ ಜೊತೆಯಲ್ಲಿಯೇ ಇರುತ್ತಿದ್ದನು. ಹೀಗಾಗಿ ಪ್ರತಿಸಲವೂ ಇಸ್ರೇಲರನ್ನು ಅವರ ಶತ್ರುಗಳಿಂದ ರಕ್ಷಿಸಲಾಯಿತು.