1
ರೋಮ್ನಗರದವರಿಗೆ ಬರೆದ ಪತ್ರ 3:23-24
ಪರಿಶುದ್ದ ಬೈಬಲ್
KERV
ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದವರಾಗಿದ್ದಾರೆ. ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವರವಾದ ಕೃಪೆಯಿಂದಲೇ. ದೇವರು ಯೇಸು ಕ್ರಿಸ್ತನ ಮೂಲಕವಾಗಿ ಜನರನ್ನು ಪಾಪದಿಂದ ಬಿಡುಗಡೆ ಮಾಡಿ, ನೀತಿವಂತರನ್ನಾಗಿ ಮಾಡುತ್ತಾನೆ.
Compare
Explore ರೋಮ್ನಗರದವರಿಗೆ ಬರೆದ ಪತ್ರ 3:23-24
2
ರೋಮ್ನಗರದವರಿಗೆ ಬರೆದ ಪತ್ರ 3:22
ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ.
Explore ರೋಮ್ನಗರದವರಿಗೆ ಬರೆದ ಪತ್ರ 3:22
3
ರೋಮ್ನಗರದವರಿಗೆ ಬರೆದ ಪತ್ರ 3:25-26
ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಆ ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು. ಹೀಗೆ ದೇವರು ತಾನೇ ನೀತಿವಂತನೆಂಬುದನ್ನು ಮತ್ತು ಯೇಸುವಿನಲ್ಲಿ ನಂಬಿಕೆಯಿಡುವ ಯಾವನನ್ನೇ ಆಗಲಿ ನೀತಿವಂತನನ್ನಾಗಿ ಮಾಡುತ್ತೇನೆಂಬದನ್ನು ನಿರೂಪಿಸಿದ್ದಾನೆ.
Explore ರೋಮ್ನಗರದವರಿಗೆ ಬರೆದ ಪತ್ರ 3:25-26
4
ರೋಮ್ನಗರದವರಿಗೆ ಬರೆದ ಪತ್ರ 3:20
ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಯಾರಿಗೂ ಸಾಧ್ಯವಿಲ್ಲ. ಧರ್ಮಶಾಸ್ತ್ರವು ನಮ್ಮ ಪಾಪವನ್ನು ಮಾತ್ರ ತೋರ್ಪಡಿಸುತ್ತದೆ.
Explore ರೋಮ್ನಗರದವರಿಗೆ ಬರೆದ ಪತ್ರ 3:20
5
ರೋಮ್ನಗರದವರಿಗೆ ಬರೆದ ಪತ್ರ 3:10-12
ಪವಿತ್ರ ಗ್ರಂಥವು ಹೀಗೆ ಹೇಳುತ್ತದೆ: “ಪಾಪವಿಲ್ಲದ ಒಬ್ಬನೂ ಇಲ್ಲ. ಇಲ್ಲವೇ ಇಲ್ಲ! ಅರ್ಥಮಾಡಿಕೊಳ್ಳುವ ಒಬ್ಬನೂ ಇಲ್ಲ. ದೇವರೊಂದಿಗಿರಲು ನಿಜವಾಗಿ ಬಯಸುವ ಒಬ್ಬನೂ ಇಲ್ಲ. ಎಲ್ಲಾ ಜನರು ದಾರಿ ತಪ್ಪಿದ್ದಾರೆ. ಎಲ್ಲಾ ಜನರು ಅಯೋಗ್ಯರಾಗಿದ್ದಾರೆ. ಒಳ್ಳೆಯದನ್ನು ಮಾಡುವ ಒಬ್ಬನೂ ಇಲ್ಲ. ಇಲ್ಲವೇ ಇಲ್ಲ!”
Explore ರೋಮ್ನಗರದವರಿಗೆ ಬರೆದ ಪತ್ರ 3:10-12
6
ರೋಮ್ನಗರದವರಿಗೆ ಬರೆದ ಪತ್ರ 3:28
ಏಕೆಂದರೆ ಒಬ್ಬನು ನೀತಿವಂತನಾಗುವುದು ನಂಬಿಕೆಯ ಮೂಲಕವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಲು ಅವನು ಮಾಡಿದ ಕಾರ್ಯಗಳಿಂದಲ್ಲ. ನಾವು ನಂಬುವುದೂ ಇದನ್ನೇ.
Explore ರೋಮ್ನಗರದವರಿಗೆ ಬರೆದ ಪತ್ರ 3:28
7
ರೋಮ್ನಗರದವರಿಗೆ ಬರೆದ ಪತ್ರ 3:4
ಇಲ್ಲ! ಪ್ರತಿಯೊಬ್ಬ ವ್ಯಕ್ತಿ ಸುಳ್ಳುಗಾರನಾದರೂ ದೇವರು ಸತ್ಯವಂತನಾಗಿಯೇ ಇರುತ್ತಾನೆ. ಪವಿತ್ರ ಗ್ರಂಥವು ಹೀಗೆಂದು ಹೇಳುತ್ತದೆ: “ನಿನ್ನ ಮಾತುಗಳಲ್ಲಿ ನೀನು ನ್ಯಾಯಸ್ಥನೆಂದು ನಿರೂಪಿತನಾಗಬೇಕು. ನಿನಗೆ ತೀರ್ಪಾಗುವಾಗ ನೀನು ಜಯಗಳಿಸಬೇಕು.”
Explore ರೋಮ್ನಗರದವರಿಗೆ ಬರೆದ ಪತ್ರ 3:4
Home
Bible
Plans
Videos