ಹೀಗೆಯೇ ಸೌಲನು ಯೆಹೋವ ದೇವರಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಯೆಹೋವ ದೇವರ ವಾಕ್ಯವನ್ನು ಕೈಗೊಳ್ಳದೆ, ಅದಕ್ಕೆ ವಿರೋಧವಾಗಿ ನಡೆದು, ಯೆಹೋವ ದೇವರನ್ನು ವಿಚಾರಿಸದೆ, ಯಕ್ಷಿಣಿಗಾರರನ್ನು ವಿಚಾರಿಸಿದ್ದರಿಂದ, ಯೆಹೋವ ದೇವರು ಅವನನ್ನು ಕೊಂದುಹಾಕಿ, ರಾಜ್ಯವನ್ನು ಇಷಯನ ಮಗನಾದ ದಾವೀದನ ಕಡೆಗೆ ತಿರುಗಿಸಿದರು.