ಸೌಲನು ಈ ಮಾತುಗಳನ್ನು ಕೇಳಿದಾಗ, ದೇವರ ಆತ್ಮವು ಬಹಳ ಸಾಮರ್ಥ್ಯದಿಂದ ಅವನ ಮೇಲೆ ಬಂದು, ಅವನು ಬಹು ಕೋಪೋದ್ರೇಕಗೊಂಡನು. ಅನಂತರ ಅವನು ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು, ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ, ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿ, “ಯಾರು ಸೌಲ ಮತ್ತು ಸಮುಯೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳಿಗೆ ಈ ಪ್ರಕಾರ ಮಾಡಲಾಗುವುದು,” ಎಂದು ಹೇಳಿದನು. ಯೆಹೋವ ದೇವರಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ, ಅವರು ಒಬ್ಬ ಮನುಷ್ಯನಂತೆ ಹೊರಟು ಬಂದರು.