ಸಮುಯೇಲನು ಸೌಲನಿಗೆ, “ನೀನು ಬುದ್ಧಿಹೀನವಾದ ಕೆಲಸಮಾಡಿದ್ದೀ; ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಯೆಹೋವ ದೇವರು ಇಸ್ರಾಯೇಲರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವುದಕ್ಕೆ ಇದ್ದರು. ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದನ್ನು ನೀನು ಕೈಗೊಳ್ಳದೆ ಹೋದದ್ದರಿಂದ, ಅವರು ತಮ್ಮ ಹೃದಯಕ್ಕೆ ತಕ್ಕಂಥ ಒಬ್ಬ ಮನುಷ್ಯನನ್ನು ಹುಡುಕಿ, ಅವನನ್ನು ತಮ್ಮ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾರೆ,” ಎಂದನು.