1
1 ಸಮುಯೇಲ 15:22
ಕನ್ನಡ ಸಮಕಾಲಿಕ ಅನುವಾದ
KSB
ಅದಕ್ಕೆ ಸಮುಯೇಲನು ಹೇಳಿದ್ದೇನೆಂದರೆ, “ಯೆಹೋವ ದೇವರ ವಾಕ್ಯಕ್ಕೆ ವಿಧೇಯನಾದರೆ, ಯೆಹೋವ ದೇವರಿಗೆ ಆಗುವ ಸಂತೋಷ ದಹನಬಲಿಗಳಲ್ಲಿಯೂ ಯಜ್ಞಗಳಲ್ಲಿಯೂ ಆಗುವುದೋ? ಇಗೋ, ಯಜ್ಞಕ್ಕಿಂತ ವಿಧೇಯತೆಯು, ಟಗರುಗಳ ಕೊಬ್ಬಿಗಿಂತ ಮಾತುಕೇಳುವುದೇ ಉತ್ತಮವಾಗಿರುವುದು.
Compare
Explore 1 ಸಮುಯೇಲ 15:22
2
1 ಸಮುಯೇಲ 15:23
ಏಕೆಂದರೆ ಪ್ರತಿಭಟಿಸುವುದು ಮಂತ್ರತಂತ್ರಗಳಷ್ಟು ಪಾಪವಾಗಿದೆ. ಹಟಮಾರಿತನವು ದುಷ್ಟತನಕ್ಕೂ ವಿಗ್ರಹಾರಾಧನೆಗೂ ಸಮಾನವಾಗಿದೆ. ನೀನು ಯೆಹೋವ ದೇವರ ವಾಕ್ಯವನ್ನು ಅಲಕ್ಷ್ಯಮಾಡಿದ್ದರಿಂದ ಅವರು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕರಿಸಿಬಿಟ್ಟಿದ್ದಾರೆ.”
Explore 1 ಸಮುಯೇಲ 15:23
3
1 ಸಮುಯೇಲ 15:29
ಇಸ್ರಾಯೇಲಿನ ಪ್ರತಾಪರು ಸುಳ್ಳು ಹೇಳುವವರಲ್ಲ, ಮಾತನ್ನು ಹಿಂತೆಗೆದುಕೊಳ್ಳುವವರಲ್ಲ. ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದನು.
Explore 1 ಸಮುಯೇಲ 15:29
4
1 ಸಮುಯೇಲ 15:11
“ನಾನು ಸೌಲನನ್ನು ಅರಸನಾಗಿ ಮಾಡಿದ್ದರಿಂದ ದುಃಖಪಡುತ್ತೇನೆ. ಏಕೆಂದರೆ ಅವನು ನನ್ನನ್ನು ಹಿಂಬಾಲಿಸುವುದನ್ನು ಬಿಟ್ಟು, ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ,” ಎಂದರು. ಅದಕ್ಕೆ ಸಮುಯೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವ ದೇವರಿಗೆ ಮೊರೆಯಿಟ್ಟನು.
Explore 1 ಸಮುಯೇಲ 15:11