ಮನಸ್ಸೆಯು ಬಾಧೆಯಲ್ಲಿರುವಾಗ ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಂಡನು ಮತ್ತು ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಪ್ರಾರ್ಥನೆಮಾಡಿದನು. ಆಗ ಯೆಹೋವ ದೇವರು ಕನಿಕರಪಟ್ಟು, ಅವನ ಬಿನ್ನಹವನ್ನು ಕೇಳಿ, ಯೆರೂಸಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರುಗಿ ಬರಮಾಡಿದರು. ಆಗ ಯೆಹೋವ ದೇವರೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.