ತುತೂರಿ ಊದುವವರೂ, ಸಂಗೀತಗಾರರೂ ಯೆಹೋವ ದೇವರನ್ನು ಕೊಂಡಾಡುತ್ತಾ, ಹೊಗಳುತ್ತಾ ಧ್ವನಿ ಎತ್ತಿ ಸ್ತೋತ್ರ ಮಾಡುವಂತೆ ತುತೂರಿಗಳೂ, ತಾಳಗಳೂ ಮೊದಲಾದ ಗೀತ ವಾದ್ಯಗಳಿಂದ ಕೀರ್ತಿಸಿದರು:
“ಯೆಹೋವ ದೇವರು ಒಳ್ಳೆಯವರು,
ಅವರ ಕೃಪೆಯು ಯುಗಯುಗಕ್ಕೆ ಇರುವುದು,”
ಎಂದು ಯೆಹೋವ ದೇವರನ್ನು ಹೊಗಳುತ್ತಿದ್ದ ಹಾಗೆ, ಯೆಹೋವ ದೇವರ ಆಲಯವು ಮೇಘದಿಂದ ತುಂಬಿತು. ಯೆಹೋವ ದೇವರ ತೇಜಸ್ಸಿನಿಂದ ವ್ಯಾಪಿಸಿದ್ದ ಆ ಮೋಡವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.