ನಮ್ಮಿಂದಲೇ ಉಂಟಾಯಿತು ಎಂದು ಹೇಳಿಕೊಳ್ಳುವುದಕ್ಕೆ ನಮಗೆ ಯಾವ ಸಾಮರ್ಥ್ಯವೂ ಇಲ್ಲ. ನಮ್ಮ ಸಾಮರ್ಥ್ಯವು ದೇವರಿಂದಲೇ ಬರುತ್ತದೆ. ದೇವರು ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂತೆ ಸಾಮರ್ಥ್ಯವನ್ನು ನೀಡಿರುತ್ತಾರೆ. ಇದು ಲಿಖಿತ ನಿಯಮಕ್ಕೆ ಸೇರಿದ್ದಾಗಿರದೆ, ಪವಿತ್ರಾತ್ಮನ ನಿಯಮದ ಸೇವೆಯಾಗಿರುತ್ತದೆ. ಏಕೆಂದರೆ, ಲಿಖಿತವಾದದ್ದು ಮರಣವನ್ನುಂಟುಮಾಡುತ್ತದೆ. ದೇವರಾತ್ಮನಿಂದಾದದ್ದು ಜೀವವನ್ನು ಉಂಟುಮಾಡುತ್ತದೆ.