1
ಅಪೊಸ್ತಲರ ಕೃತ್ಯಗಳು 14:15
ಕನ್ನಡ ಸಮಕಾಲಿಕ ಅನುವಾದ
KSB
“ಪ್ರಿಯ ಜನರೇ, ನೀವಿದನ್ನು ಏಕೆ ಮಾಡುತ್ತಿರುವಿರಿ? ನಾವೂ ನಿಮ್ಮ ಹಾಗೆಯೇ ಮಾನವರು. ಇಂಥಾ ವ್ಯರ್ಥವಾದ ಸಂಗತಿಗಳನ್ನು ಬಿಟ್ಟು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದ ಜೀವಿಸುವ ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ನಿಮಗೆ ಸುವಾರ್ತೆಯನ್ನು ಸಾರುತ್ತಿದ್ದೇವೆ.
Compare
Explore ಅಪೊಸ್ತಲರ ಕೃತ್ಯಗಳು 14:15
2
ಅಪೊಸ್ತಲರ ಕೃತ್ಯಗಳು 14:9-10
ಪೌಲನು ಮಾತನಾಡುತ್ತಿರುವುದನ್ನು ಅವನು ಆಲಿಸುತ್ತಿದ್ದನು. ಪೌಲನು ನೇರವಾಗಿ ಅವನನ್ನೇ ದೃಷ್ಟಿಸಿ ನೋಡಿ, ತಾನು ಗುಣಹೊಂದಲು ಅವನಲ್ಲಿ ವಿಶ್ವಾಸವಿದೆಯೆಂದು ಕಂಡು, “ಎದ್ದೇಳು, ಕಾಲೂರಿ ನಿಲ್ಲು!” ಎಂದು ದೊಡ್ಡ ಧ್ವನಿಯಿಂದ ಹೇಳಿದನು. ಆ ಮನುಷ್ಯನು ಜಿಗಿದು ನಿಂತು, ನಡೆದಾಡಲು ಪ್ರಾರಂಭಿಸಿದನು.
Explore ಅಪೊಸ್ತಲರ ಕೃತ್ಯಗಳು 14:9-10
3
ಅಪೊಸ್ತಲರ ಕೃತ್ಯಗಳು 14:23
ಪ್ರತಿಯೊಂದು ಸಭೆಯಲ್ಲಿ ಪೌಲ, ಬಾರ್ನಬರು ಸಭಾ ಹಿರಿಯರನ್ನು ನೇಮಿಸಿ, ಉಪವಾಸ ಪ್ರಾರ್ಥನೆಯನ್ನು ಮಾಡಿ ಅವರು ನಂಬಿದ್ದ ಕರ್ತ ಯೇಸುವಿಗೆ ಅವರನ್ನು ಒಪ್ಪಿಸಿಕೊಟ್ಟರು.
Explore ಅಪೊಸ್ತಲರ ಕೃತ್ಯಗಳು 14:23