ಎಂಟು ಹತ್ತು ದಿನಗಳನ್ನು ಅವರೊಂದಿಗೆ ಕಳೆದ ತರುವಾಯ ಅವನು ಕೈಸರೈಯಕ್ಕೆ ಹೋದನು. ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು ತನ್ನ ಮುಂದೆ ಪೌಲನನ್ನು ಕರೆತರಬೇಕೆಂದು ಆಜ್ಞಾಪಿಸಿದನು. ಪೌಲನು ಅಲ್ಲಿಗೆ ಬಂದಾಗ, ಯೆರೂಸಲೇಮಿನಿಂದ ಬಂದ ಯೆಹೂದ್ಯರು ಅವನ ಸುತ್ತಲೂ ಎದ್ದು ನಿಂತು, ಅನೇಕ ತೀವ್ರ ಆಪಾದನೆಗಳನ್ನು ಅವನ ವಿರುದ್ಧ ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಗೆ ಸಾಧ್ಯವಾಗಲಿಲ್ಲ.