ನಾನು ನಿನ್ನ ಸ್ವಂತ ಜನರಿಂದಲೂ ಯೆಹೂದ್ಯರಲ್ಲದವರಿಂದಲೂ ನಿನ್ನನ್ನು ಕಾಪಾಡುವೆನು. ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.