ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲಸುಮಾಡಿ, ನಿತ್ಯ ಯಜ್ಞವನ್ನು ನಿಲ್ಲಿಸುವುದು. ಹಾಳುಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವುದು. ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆಯುವವರನ್ನು ನಯವಾದ ಮಾತುಗಳಿಂದ ಕೆಡಿಸುವನು, ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಎದುರಿಸುವರು.