ಆಗ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬವರು ಅರಸನಿಗೆ ಉತ್ತರವಾಗಿ, “ನೆಬೂಕದ್ನೆಚ್ಚರನೇ, ಈ ವಿಷಯದ ಬಗ್ಗೆ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಹಾಗೆ ಇದ್ದರೆ, ನಿಶ್ಚಯವಾಗಿ ನಾವು ಆರಾಧಿಸುವ ನಮ್ಮ ದೇವರು ಉರಿಯುವ ಬೆಂಕಿಯ ಕುಲುಮೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥರಾಗಿದ್ದಾರೆ. ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವರು. ಆದರೆ ಒಂದು ವೇಳೆ ಅವರು ತಪ್ಪಿಸದಿದ್ದರೂ, ಅರಸನೇ ನಾವು ನಿನ್ನ ದೇವರುಗಳನ್ನು ಸೇವಿಸುವುದಿಲ್ಲವೆಂದೂ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲವೆಂದೂ ನಿನಗೆ ತಿಳಿದಿರಲಿ,” ಎಂದರು.