ಆ ಸಮಯದ ಅಂತ್ಯದಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರಲೋಕದ ಕಡೆಗೆ ಎತ್ತಿದೆನು. ನನ್ನ ತಿಳುವಳಿಕೆ ನನಗೆ ತಿರುಗಿ ಬಂತು. ಆಗ ನಾನು ಮಹೋನ್ನತರನ್ನು ಕೊಂಡಾಡಿದೆನು. ಸದಾಕಾಲಕ್ಕೂ ಇರುವವರಾದ ಅವರನ್ನು ಗೌರವಿಸಿ, ಮಹಿಮೆ ಪಡಿಸಿದೆನು.
ಅವರ ಆಡಳಿತವು ನಿತ್ಯವಾದ ಆಡಳಿತವಾಗಿದೆ.
ಅವರ ರಾಜ್ಯವು ತಲತಲಾಂತರಕ್ಕೂ ಇರುವುದು.