ನನ್ನ ದೇವರೇ, ನೀವು ಕಿವಿಗೊಟ್ಟು ಕೇಳಿರಿ. ನಿಮ್ಮ ಕಣ್ಣುಗಳನ್ನು ತೆರೆದು ನಮ್ಮ ನಾಶವನ್ನೂ, ನಿಮ್ಮ ಹೆಸರಿನಿಂದ ಕರೆಯಲಾಗುವ ಈ ಹಾಳಾಗಿರುವ ಪಟ್ಟಣವನ್ನೂ ನೋಡಿರಿ. ಏಕೆಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿಮ್ಮ ಮಹಾ ಕರುಣೆಗಾಗಿಯೇ ನಮ್ಮ ವಿಜ್ಞಾಪನೆಗಳನ್ನು ನಿಮ್ಮ ಮುಂದೆ ಅರ್ಪಿಸುತ್ತೇವೆ. ಕರ್ತದೇವರೇ ಕೇಳಿರಿ! ಕರ್ತದೇವರೇ ಕ್ಷಮಿಸಿರಿ! ಕರ್ತದೇವರೇ ಲಾಲಿಸಿರಿ ಮತ್ತು ಕಾರ್ಯವನ್ನು ಸಾಧಿಸಿರಿ! ನನ್ನ ದೇವರೇ, ನಿಮ್ಮ ನಿಮಿತ್ತವಾಗಿ ತಡಮಾಡಬೇಡಿರಿ. ಏಕೆಂದರೆ ನಿಮ್ಮ ಪಟ್ಟಣವೂ ನಿಮ್ಮ ಜನರೂ ನಿಮ್ಮ ಹೆಸರನ್ನು ಧರಿಸಿದ್ದಾರೆ.”