1
ಎಸ್ತೇರಳು 6:1-2
ಕನ್ನಡ ಸಮಕಾಲಿಕ ಅನುವಾದ
KSB
ಆ ರಾತ್ರಿ ಅರಸನಿಗೆ ನಿದ್ರೆ ಬರಲಿಲ್ಲ. ಆದ್ದರಿಂದ ಅರಸನು ಇತಿಹಾಸ ಘಟನೆಗಳನ್ನು ಬರೆದಿಟ್ಟಿದ್ದ ಗ್ರಂಥವನ್ನು ತೆಗೆದುಕೊಂಡು ಬರಲು ಹೇಳಿದನು. ಅದನ್ನು ಅರಸನ ಮುಂದೆ ತಂದು ಓದಿಸಿದಾಗ, ದ್ವಾರಪಾಲಕರಾಗಿದ್ದ ರಾಜಕಂಚುಕಿಯರಲ್ಲಿ ಇಬ್ಬರಾದ ಬಿಗೆತಾನನೂ ತೆರೆಷನೂ ಅರಸನಾದ ಅಹಷ್ವೇರೋಷನನ್ನು ಕೊಲ್ಲಬೇಕೆಂದು ಒಳಸಂಚುಮಾಡಿದ ಘಟನೆಯು ಬರೆದಿತ್ತು. ಮೊರ್ದೆಕೈಯು ಹೇಗೆ ಅದನ್ನು ಅರಸನಿಗೆ ತಿಳಿಸಿದನೆಂದು ಸಹ ಅದರಲ್ಲಿ ಬರೆದಿತ್ತು.
Compare
Explore ಎಸ್ತೇರಳು 6:1-2
2
ಎಸ್ತೇರಳು 6:6
ಹಾಮಾನನು ಒಳಕ್ಕೆ ಬಂದಾಗ ಅರಸನು ಅವನಿಗೆ, “ಅರಸನು ಒಬ್ಬ ವ್ಯಕ್ತಿಯನ್ನು ಸನ್ಮಾನಿಸಲು ಬಯಸಿದರೆ ಮನುಷ್ಯನಿಗೆ ಅಂಥ ವ್ಯಕ್ತಿಗೆ ಮಾಡಬೇಕಾದದ್ದೇನು?” ಎಂದು ವಿಚಾರಿಸಿದನು. ಆಗ ಹಾಮಾನನು ತನ್ನನ್ನು ಅಲ್ಲದೆ ಅರಸನು ಬೇರೆ ಯಾರನ್ನು ಸನ್ಮಾನಿಸಬೇಕೆಂದಿರುವನು ಎಂದುಕೊಂಡನು.
Explore ಎಸ್ತೇರಳು 6:6
3
ಎಸ್ತೇರಳು 6:10
ಆಗ ಅರಸನು ಹಾಮಾನನಿಗೆ, “ನೀನು ಹೇಳಿದ ಪ್ರಕಾರವೇ ಬೇಗನೆ ಹೋಗಿ ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತಿರುವ ಯೆಹೂದ್ಯನಾದ ಮೊರ್ದೆಕೈಗೆ ಹಾಗೆಯೇ ಮಾಡು. ನೀನು ಸಲಹೆಮಾಡಿದ್ದರಲ್ಲಿ ಒಂದನ್ನೂ ಬಿಡದೆ, ಎಲ್ಲವನ್ನೂ ಮಾಡು,” ಎಂದು ಹಾಮಾನನಿಗೆ ಆಜ್ಞಾಪಿಸಿದನು.
Explore ಎಸ್ತೇರಳು 6:10