ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ, ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು. ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನನ್ನು ಯೆಹೋವ ದೇವರು ಕೂಗಿ ಅವನಿಗೆ, “ಯೆರೂಸಲೇಮಿನ ಪಟ್ಟಣದ ಮಧ್ಯೆ ಹಾದು ಹೋಗಿ, ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು,” ಎಂದರು.