“ನಮ್ಮ ದೇವರ ಕೃಪಾಹಸ್ತವು ಅವರನ್ನು ಹುಡುಕುವವರೆಲ್ಲರ ಮೇಲೆಯೂ ಇದೆ, ಆದರೆ ಅವರ ಕೋಪವು ಅವರನ್ನು ತ್ಯಜಿಸುವ ಎಲ್ಲರ ವಿರುದ್ಧವಾಗಿರುತ್ತದೆ,” ಎಂದು ನಾವು ಅರಸನಿಗೆ ಹೇಳಿದ್ದರಿಂದ, ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಸೈನ್ಯವನ್ನೂ ಅಶ್ವಬಲವನ್ನೂ ಅರಸನಿಂದ ಕೇಳಲು ನಾಚಿಕೆಪಟ್ಟೆವು. ಆದ್ದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ದೇವರು ನಮ್ಮ ವಿಜ್ಞಾಪನೆಯನ್ನು ಕೇಳಿದರು.