ಗಿಲ್ಯಾದ್ಯರು ಎಫ್ರಾಯೀಮ್ಯರಿಗೆ ಮುಂದುಗಡೆ ಯೊರ್ದನ್ ನದಿ ರೇವುಗಳನ್ನು ಹಿಡಿದರು. ಆಗ ಏನಾಯಿತೆಂದರೆ, ಎಫ್ರಾಯೀಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು, “ದಾಟುತ್ತೇನೆ,” ಎಂದು ಹೇಳಿದರೆ, ಗಿಲ್ಯಾದ್ಯರು, “ನೀನು ಎಫ್ರಾಯೀಮ್ಯನೋ?” ಎಂದು ಅವನನ್ನು ಕೇಳುತ್ತಿದ್ದರು. ಅವನು, “ಇಲ್ಲ,” ಎಂದರೆ, ಅವನಿಗೆ, “ನೀನು ಷಿಬ್ಬೋಲೆತ್ ಅನ್ನು,” ಎಂದು ಹೇಳುತ್ತಿದ್ದರು. ಆಗ ಅವನು ಹಾಗೆ ಹೇಳಲಾರದೆ, “ಸಿಬ್ಬೋಲೆತ್,” ಎಂದು ಉಚ್ಛರಿಸುವವನನ್ನು ಹಿಡಿದು ಯೊರ್ದನ್ ನದಿ ರೇವುಗಳ ಬಳಿಯಲ್ಲಿ ಕೊಂದುಹಾಕುತ್ತಿದ್ದರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ನಾಶವಾದರು.