“ಈ ಜನಕ್ಕೆ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಜೀವದ ಮಾರ್ಗವನ್ನೂ, ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ. ಈ ಪಟ್ಟಣದಲ್ಲಿ ನಿಲ್ಲುವವನು ಖಡ್ಗದಿಂದಲೂ, ಕ್ಷಾಮದಿಂದಲೂ, ವ್ಯಾಧಿಯಿಂದಲೂ ಸಾಯುವನು. ಆದರೆ ಹೊರಗೆ ಹೋಗಿ, ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರುವವನು ಬದುಕುವನು. ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.