1
ಯೆರೆಮೀಯ 22:3
ಕನ್ನಡ ಸಮಕಾಲಿಕ ಅನುವಾದ
KSB
ಯೆಹೋವ ದೇವರು ಹೇಳುವುದೇನೆಂದರೆ: ನ್ಯಾಯವನ್ನೂ, ನೀತಿಯನ್ನೂ ನಡೆಸಿರಿ. ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಪರದೇಶಸ್ಥನಿಗೆ, ದಿಕ್ಕಿಲ್ಲದವನಿಗೆ ಮತ್ತು ವಿಧವೆಗೆ ಉಪದ್ರವವನ್ನಾದರೂ, ಬಲಾತ್ಕಾರವನ್ನಾದರೂ ಮಾಡಬೇಡಿರಿ. ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲಬೇಡಿರಿ.
Compare
Explore ಯೆರೆಮೀಯ 22:3
2
ಯೆರೆಮೀಯ 22:15-16
“ಹೆಚ್ಚು ಹೆಚ್ಚು ದೇವದಾರುಗಳನ್ನು ಹೊಂದಲು ಅದು ನಿಮ್ಮನ್ನು ರಾಜನನ್ನಾಗಿಸುತ್ತದೆಯೇ? ನಿನ್ನ ತಂದೆ ಉಂಡು, ಕುಡಿದು ನ್ಯಾಯವನ್ನೂ, ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾಗಲಿಲ್ಲವೋ? ಬಡವನ ಮತ್ತು ದರಿದ್ರನ ನ್ಯಾಯವನ್ನು ತೀರಿಸಿದನು. ಆಗ ಅವನಿಗೆ ಒಳ್ಳೆಯದಾಯಿತು. ನನ್ನನ್ನು ತಿಳಿದುಕೊಳ್ಳುವುದು ಇದೇ ಅಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ.
Explore ಯೆರೆಮೀಯ 22:15-16
3
ಯೆರೆಮೀಯ 22:13
“ಅನೀತಿಯಿಂದ ತನ್ನ ಅರಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳುವವನಿಗೂ, ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸ ತೆಗೆದುಕೊಳ್ಳುವವನೂ ಕಷ್ಟ!
Explore ಯೆರೆಮೀಯ 22:13