“ನನ್ನ ಒಡೆಯನಾದ ಅರಸನೇ, ಈ ಮನುಷ್ಯರು ಬಾವಿಯಲ್ಲಿ ಹಾಕಿದ ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ; ಏಕೆಂದರೆ ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ,” ಎಂದನು.
ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡು ಹೋಗಿ, ಪ್ರವಾದಿಯಾದ ಯೆರೆಮೀಯನನ್ನು ಅವನು ಸಾಯುವುದಕ್ಕಿಂತ ಮುಂಚೆ ಬಾವಿಯೊಳಗಿಂದ ಮೇಲಕ್ಕೆತ್ತು,” ಎಂದು ಆಜ್ಞಾಪಿಸಿದನು.