‘ಈಗ ನನಗೆ ಕಷ್ಟ! ಏಕೆಂದರೆ, ಯೆಹೋವ ದೇವರು ನನ್ನ ನೋವಿಗೆ ಚಿಂತೆಯನ್ನು ಕೂಡಿಸಿದ್ದಾರೆ. ನಿಟ್ಟುಸಿರು ಬಿಡುವುದರಿಂದ ದಣಿದಿದ್ದೇನೆ. ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿಯಲ್ಲಾ.’ ಆದರೆ ನಿಮಗೆ ಹೇಳಲು ಯೆಹೋವ ದೇವರು ನನಗೆ ಹೇಳಿದ್ದಾರೆ. ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ. ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.