ಯೆಹೋವ ದೇವರು ಹೀಗೆ ಹೇಳುತ್ತಾರೆ:
“ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳ ಪಡದಿರಲಿ.
ಬಲಿಷ್ಠನು ತನ್ನ ಬಲದಲ್ಲಿ ಹೆಚ್ಚಳ ಪಡದಿರಲಿ.
ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳ ಪಡದಿರಲಿ.
ಆದರೆ ಹೆಚ್ಚಳ ಪಡುವವನು,
ಯೆಹೋವ ದೇವರಾದ ನಾನು ಭೂಮಿಯಲ್ಲಿ ದಯೆಯನ್ನೂ,
ನ್ಯಾಯವನ್ನೂ, ನೀತಿಯನ್ನೂ ನಡೆಸುವವನಾಗಿದ್ದೇನೆಂದು
ಗ್ರಹಿಸಿ ತಿಳಿದುಕೊಳ್ಳುವುದರಲ್ಲಿಯೇ ಹೆಚ್ಚಳ ಪಡಲಿ.
ಇವುಗಳಲ್ಲಿ ನಾನು ಸಂತೋಷಪಡುತ್ತೇನೆ,”
ಎಂದು ಯೆಹೋವ ದೇವರು ಹೇಳುತ್ತಾರೆ.