ಆದರೆ ದೇವರು ತಮ್ಮ ಶಕ್ತಿಯಿಂದ ಬಲಿಷ್ಠರನ್ನು ಎಳೆದೊಯ್ಯುತ್ತಾರೆ;
ಬಲಿಷ್ಠರು ಉದ್ಧಾರವಾಗಿದ್ದರೂ ಅವರಿಗೆ ಜೀವನದ ಭರವಸೆ ಇಲ್ಲ.
ಭದ್ರತೆಯಲ್ಲಿ ವಿಶ್ರಾಂತಿ ಪಡೆಯಲು ದೇವರು ಅವರಿಗೆ ಅವಕಾಶ ನೀಡಬಹುದು;
ಆದರೆ ದೇವರ ಕಣ್ಣುಗಳು ಅವರ ಮಾರ್ಗಗಳ ಮೇಲಿರುವುದು.
ಅವರು ಸ್ವಲ್ಪಕಾಲ ಉನ್ನತವಾಗಿದ್ದು ನಂತರ ಇಲ್ಲದೆ ಹೋಗುತ್ತಾರೆ;
ಅವರು ಎಲ್ಲಾ ಮನುಷ್ಯರಂತೆ ಕೊಯ್ದ ತೆನೆಯ ಹಾಗೆ
ಕೆಳಗೆ ಬಿದ್ದು ಕಾಳಿನಂತೆ ಬೇರ್ಪಡುತ್ತಾರೆ.