“ಆದ್ದರಿಂದ ಬುದ್ಧಿವಂತರೇ, ನಾನು ಹೇಳುವುದನ್ನು ಕೇಳಿರಿ,
ದೇವರು ಕೆಟ್ಟದ್ದನ್ನು ಮಾಡುತ್ತಾರೆಂಬ ಯೋಚನೆ ದೂರವಿರಲಿ.
ಸರ್ವಶಕ್ತರು ಅನ್ಯಾಯವನ್ನು ಎಸಗುತ್ತಾರೆಂಬ ಭಾವನೆ ದೂರವಾಗಿರಲಿ.
ದೇವರು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕ ಫಲವನ್ನು ಕೊಡುತ್ತಾರೆ;
ಹೌದು, ದೇವರು ಪ್ರತಿಯೊಬ್ಬರನ್ನು ಅವರವರ ನಡತೆಗೆ ತಕ್ಕಂತೆ ಅನುಭವಿಸಮಾಡುತ್ತಾರೆ.