ಅದೇ ದಿವಸದಲ್ಲಿ ಜನರು ಕೇಳುವಂತೆ ಮೋಶೆಯ ನಿಯಮ ಗ್ರಂಥವನ್ನು ಗಟ್ಟಿಯಾಗಿ ಓದುವಾಗ, “ಅಮ್ಮೋನಿಯರೂ, ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದು,” ಎಂದು ಅದರಲ್ಲಿ ಬರೆದದ್ದು ಸಿಕ್ಕಿತು. ಏಕೆಂದರೆ ಅವರು ಅನ್ನಪಾನಗಳೊಡನೆ ಇಸ್ರಾಯೇಲರನ್ನು ಎದುರುಗೊಳ್ಳಲಿಲ್ಲ. ಅವರು ಇಸ್ರಾಯೇಲರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣಕೊಟ್ಟು ಕರೆಸಿದ್ದರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದರು.