ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ? ಯೆರೂಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಯೆರೂಸಲೇಮಿನ ಗೋಡೆಯನ್ನು ಪುನಃ ಕಟ್ಟೋಣ. ಹೀಗೆ ಮಾಡಿದರೆ, ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ. ಇದಲ್ಲದೆ, ನನ್ನ ದೇವರ ಕೃಪಾಹಸ್ತ ನನ್ನನ್ನು ಹೇಗೆ ನಡೆಸಿತೆಂಬುದನ್ನೂ, ರಾಜನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆ.
ಆಗ ಅವರು, “ಬನ್ನಿ, ಪುನಃ ಕಟ್ಟೋಣ,” ಎಂದು ಹೇಳಿ, ಆ ಒಳ್ಳೆಯ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು.