ನಾನು ಗೋಡೆಯನ್ನು ಪುನಃ ಕಟ್ಟಿಸಿ, ಬಾಗಿಲುಗಳನ್ನು ನಿಲ್ಲಿಸಿ, ತರುವಾಯ ಬಾಗಿಲು ಕಾಯುವವರನ್ನು, ಹಾಡುಗಾರರನ್ನು, ಲೇವಿಯರನ್ನು ನೇಮಿಸಿದೆನು. ಆಮೇಲೆ ನಾನು ನನ್ನ ಸಹೋದರನಾದ ಹನಾನೀ ಮತ್ತು ಅರಮನೆಯ ಅಧಿಪತಿಯಾದ ಹನನ್ಯ ಇವರಿಗೆ ಯೆರೂಸಲೇಮಿನ ಜವಾಬ್ದಾರಿಕೆಯನ್ನು ಒಪ್ಪಿಸಿದೆನು. ಏಕೆಂದರೆ ಇವನು ಸತ್ಯವಂತನಾಗಿಯೂ, ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.