“ಆದರೆ ನಮ್ಮ ಪಿತೃಗಳು ಗರ್ವಪಟ್ಟು ನಡೆದು, ಹಟಮಾರಿಗಳೂ, ಕಠಿಣರೂ ಆಗಿ ನಿಮ್ಮ ಆಜ್ಞೆಗಳಿಗೆ ಅವಿಧೇಯರಾದರು. ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.