ಅವರ ಹಿಂದೆ ಮೂರನೆಯವನಾದ ಒಬ್ಬ ದೇವದೂತನು ಬಂದು, “ಯಾವುದಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ, ಕೈಯ ಮೇಲಾಗಲಿ ಗುರುತು ಹಾಕಿಸಿಕೊಂಡರೆ, ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು. ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ. ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಿಗಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರು ಹಗಲಿರುಳೂ ವಿಶ್ರಾಂತಿ ಪಡುವುದಿಲ್ಲಾ!” ಎಂದು ಮಹಾಶಬ್ದದಿಂದ ಹೇಳಿದನು.